ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗಧಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೊಂದಲಕ್ಕೆ ಕಾರಣವಾಗಿತ್ತು. ಇಂತಹ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದಂತ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಈ ಮೂಲಕ ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷಾ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಕೇಂದ್ರ ಲೋಕಸೇವಾ ಅಯೋಗ ಪರೀಕ್ಷೆಗಳು 2021 ರ ಜನವರಿ 8 ರಿಂದ 10 ರವರೆ ಹಾಗೂ 16, 17 ರಂದು ನಡೆಯಲಿವೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಗಳು 2020 ರ ಡಿಸೆಂಬರ್ 21 ರಿಂದ 24 ಮತ್ತು ಜನವರಿ 02 ರಿಂದ 05 ರವರೆಗೆ ನಿಗದಿಯಾಗಿವೆ.
ಕೆಪಿಎಸ್ಸಿ ಮತ್ತು ಯುಪಿಎಸ್ಸಿ ಪರೀಕ್ಷೆಗಳ ನಡುವೆ ಅಂತರ ಕಡಿಮೆ ಇರುವ ಕಾರಣ ಎರಡೂ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳಿಗೆ ಸಿದ್ಧತೆ ನಡೆಸಲು ಕಷ್ಟವಾಗುತ್ತಿದೆ.
ಯುಪಿಎಸ್ಸಿ ಸಿವಿಲ್ ಪರೀಕ್ಷೆಗಳಿಗೆ ತಯಾರಿ ನಡೆಸುವವರು ಕೆಎಎಸ್ ಪರೀಕ್ಷೆಗಳಿಗೂ ಸಿದ್ಧತೆ ನಡೆಸುತ್ತಿರುತ್ತಾರೆ. ಆದರೆ ಸಿದ್ಧತೆ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ನಿರಂತರವಾಗಿ ಪರೀಕ್ಷೆಗಳನ್ನು ಎದುರಿಸಬೇಕಾದಾಗ ತಯಾರಿಯಲ್ಲಿ ಭಿನ್ನತೆ ಕಾರಣ, ಕೆಪಿಎಸ್ಸಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ನಿಗದಿ ಪಡಿಸಬೇಕಿತ್ತು ಎಂಬುದು ಅಭ್ಯರ್ಥಿಗಳ ಆಗ್ರಹಿದ್ದರು.
ಇಂತಹ ಉದ್ಯೋಗಾಕಾಂಕ್ಷಿಗಳ ಆಗ್ರಹಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಯುಪಿಎಸ್ಸಿ ಪರೀಕ್ಷೆಗಳ ಜೊತೆಗೆ ನಿಗಧಿಯಾಗಿದ್ದಂತ ಕೆಪಿಎಸ್ಸಿಯ ಪರೀಕ್ಷೆಗಳನ್ನು ಒಂದು ತಿಂಗಳು ಮುಂದೂಡಿಕೆ ಮಾಡಲು ಸೂಚನೆ ನೀಡಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.