ಬೆಂಗಳೂರು : ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯ ಮುಂಭಾಗದ ಹೆಚ್.ಬಿ.ಕಲ್ಯಾಣ ಮಂಟಪದ ಬಳಿಯ ಚರಂಡಿ ದುರಸ್ತಿ ವೇಳೆ ಬಿಬಿಎಂಪಿ ಸಿಬ್ಬಂದಿಗೆ ಶವವೊಂದು ಪತ್ತೆಯಾಗಿದ್ದು, ವಿಜಯನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಚರಂಡಿಯಲ್ಲಿ ಹಲವು ದಿನಗಳಿಂದ ಸರಾಗವಾಗಿ ನೀರು ಹೋಗುತ್ತಿರಲಿಲ್ಲ. ಇದರಿಂದ ಸುತ್ತಮುತ್ತಲಿನ ಪ್ರದೇಶ ವಾಸನೆಯಿಂದ ಕೂಡಿತ್ತು.
ಈ ಸಂಬಂಧ ಬಿಬಿಎಂಪಿ ಸಿಬ್ಬಂದಿ ಚರಂಡಿಯಲ್ಲಿ ಹೂಳು ತೆಗೆಯಲು ಮೋರಿಯ ಛಾವಣಿ ತೆಗೆಯಲು ಮುಂದಾಗುತ್ತಿದ್ದಂತೆ ಶವದ ಕಳೇಬರ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. 2 ವರ್ಷಕ್ಕೂ ಹಿಂದೆಯೇ ಮಹಿಳೆ ಶವವನ್ನು ಚರಂಡಿಯಲ್ಲಿ ಹಾಕಿರಬಹುದು ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ. ಸದ್ಯ ಶವವನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.
ಮೃತಪಟ್ಟಿರುವವರ ಹೆಸರು, ವಿಳಾಸ ಗೊತ್ತಾಗಿಲ್ಲ. ಈ ಹಿಂದೆ ದಾಖಲಾಗಿದ್ದ ನಾಪತ್ತೆ ಪ್ರಕರಣಗಳ ಮಾಹಿತಿ ಕಲೆ ಹಾಕಿರುವ ಪೊಲೀಸರು ಅನಾಥ ಶವದ ಮಾಹಿತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
EmoticonEmoticon