Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : `ಅಂಬೇಡ್ಕರ್ ನಿವಾಸ್ ಯೋಜನೆ'ಯಡಿ ಅರ್ಜಿ ಆಹ್ವಾನ

 


ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್‍ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 09 ಹಾಗೂ ಪರಿಶಿಷ್ಟ ಪಂಗಡದವರಿಗೆ 03 ಸೇರಿದಂತೆ ಒಟ್ಟು 12 ಮನೆಗಳ ಗುರಿಯನ್ನು ನಿಗದಿಪಡಿಸಿದ್

ಆಸಕ್ತಿವುಳ್ಳ ಅರ್ಹ ಫಲಾನುಭವಿಗಳು ಜ.25 ರ ಒಳಗೆ ಸೂಕ್ತ ದಾಖಲಾತಿಗಳೊಂದಿಗೆ ನಿಗದಿಪಡಿಸಿ ನಮೂನೆಯಲ್ಲಿ ಜಗಳೂರು ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬಯಸುವವರು ಖಾಲಿ ನಿವೇಶನ ಹೊಂದಿರಬೇಕು, ಜಗಳೂರು ಪಟ್ಟಣದ ನಿವಾಸಿಯಾಗಿರಬೇಕು, 2 ಪಾಸ್‍ಪೋರ್ಟ್ ಪೋಟೋ, ಕುಟುಂಬ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ತಹಶೀಲ್ದಾರ್ ಅವರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವೇಶನ ಖಾತೆ ನಕಲು (ಕೆ.ಎಂ.ಎಫ್ ನಮೂನೆ-3) ಪ್ರತಿಗಳನ್ನು ಹಾಗೂ ತನ್ನ ಹೆಸರಿನಲ್ಲಿ ಈಗಾಗಲೇ ಪಕ್ಕಾ ಮನೆ ಇಲ್ಲವೆಂದು 20/- ಛಾಪಾ ಕಾಗದದಲ್ಲಿ ಪ್ರಮಾಣಪತ್ರವನ್ನು ಜಗಳೂರು ಪಟ್ಟಣದ ಪಂಚಾಯಿತಿಯ ಆಶ್ರಯ ಶಾಖೆಗೆ ಸಲ್ಲಿಸಬೇಕು ಎಂದು ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Comments